ಮೊನ್ನೆ ತಾನೇ "ಬೆಂದ ಕಾಳೂರು" ಎಂಬ ಬೆಂಗಳೂರಿನ ಬೀದಿ ಒಂದರಲ್ಲಿ ಹೋಗುತ್ತಿದ್ದಾಗ ಫುಟ್ ಪಾತ್ ಮೇಲೆ ಕುಳಿತು ಸಿಗರೇಟು ಸೇದುತ್ತಿದ್ದ ಪುಟ್ಟ ಹುಡುಗನನ್ನು ನೋಡಿದೆ.... ಎಳಸು ಬಾಲಕನ ಬಾಯಿ ತುಂಬಾ ಹೊಗೆ! ಪಕ್ಕದಲ್ಲೇ ಇನ್ನೊಬ್ಬ ಪೋರ ಕುಳಿತು ತನ್ನ ಸರದಿಗಾಗಿ ಕಾಯುತ್ತಿದ್ದ.. ಬಳಪ ಹಿಡಿಯಬೇಕಾದ ಕೈಯಲ್ಲಿ "ಬತ್ತಿ" !!!
ಇದು ತಪ್ಪು ಎಂದು ಬುದ್ದಿ ಹೇಳುವವರಿಲ್ಲ... ರಾಜಧಾನಿಯ ಮಹಾಜನತೆ ತಮ್ಮ ತಮ್ಮ ಕೆಲಸಗಳಲ್ಲೇ ಮಗ್ನ !
ರಾಜಕೀಯದ ಅತಿರಥ ಮಹಾರಥರೆಲ್ಲರೂ ಚುನಾವಣೆಯಲ್ಲಿ "ಬ್ಯುಸಿ"ಯಾಗಿದ್ದರೆ, ಕನ್ನಡದ ಸೇನಾನಿಗಳೆಲ್ಲ ಬೆಂಗಳೂರು ವಿಮಾನ ನಿಲ್ದಾಣಕ್ಕೆ ಹೆಸರಿಡುವುದರಲ್ಲಿ ತಲ್ಲೀನ..
ಪ್ರತಿ "ಕ್ಷಣ"ವೂ ಹಣ ಬೇಡುವ ನಗರವಲ್ಲವೇ ?
ಆ ಪುಟ್ಟ ಕಂದನ ಭವಿಷ್ಯವನ್ನು ನೆನೆದಾಗ ಕಂಡದ್ದು.....
"ವಿಷಾದ"
" ಹೊಗೆಯು ಹೊಮ್ಮುತಲಿಹುದು
ಕೆಮ್ಮು ಚಿಮ್ಮುತಲಿಹುದು
ರಸ್ತೆ ಬದಿ ಕುಳಿತಿರುವ
ಹುಡುಗನೆದೆಯಿಂದ...
ಪುಟ್ಟ ಕಂದನ ಕೈಲಿ
ಸುಡು ಸುಡುವ ಹೊಗೆಬತ್ತಿ...
ಜಗವು ನೋಡುತಲಿಹುದು
ನಿರ್ಭಾವದಿಂದ..."
2 comments:
good..continue.......
Nice Blog. Continue it. With Good wihses.
Nethrakere Udaya Shankara
www.paryaya.blogspot.com
Post a Comment